“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
TSK
TSK · ಹೋಶೇ 12:9
Treasury of Scripture Knowledge references in ಕನ್ನಡ IRV.
ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”
ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.
ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.
ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.
¶ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.