TSK

TSK · ಹೋಶೇ 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

¶ ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.

¶ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

¶ ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.

¶ ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.

¶ ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.