TSK

TSK · ಹೋಶೇ 13:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.

ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,

ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ

ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.

ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.

ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.

ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.

ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.

ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.

ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.

ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.