“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
TSK
TSK · ಹೋಶೇ 13:2
Treasury of Scripture Knowledge references in ಕನ್ನಡ IRV.
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.
ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.