TSK

TSK · ಹೋಶೇ 14:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.

ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.

ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,

ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.

ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

¶ “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.

ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.

ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.

ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.

¶ ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.