ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.
TSK
TSK · ಹೋಶೇ 2:18
Treasury of Scripture Knowledge references in ಕನ್ನಡ IRV.
ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.
ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
¶ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
¶ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”
ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.