TSK

TSK · ಹೋಶೇ 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.

ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.

ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.

¶ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,

ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.