ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
TSK
TSK · ಹೋಶೇ 2:7
Treasury of Scripture Knowledge references in ಕನ್ನಡ IRV.
ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.
ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.
ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.
ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.