¶ ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
TSK
TSK · ಹೋಶೇ 3:1
Treasury of Scripture Knowledge references in ಕನ್ನಡ IRV.
ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.
ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.
ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.