TSK

TSK · ಹೋಶೇ 4:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.

ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

¶ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

¶ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”

ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.

ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.

ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.

ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.

ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.

ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.

‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

‹ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.›