ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
TSK
TSK · ಹೋಶೇ 4:2
Treasury of Scripture Knowledge references in ಕನ್ನಡ IRV.
ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.
ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.
ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.
ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.
ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?
¶ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!
“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.