TSK

TSK · ಹೋಶೇ 4:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.

ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.

ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.

ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.

ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.

ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.

ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.

ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.

ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”

ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.

“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.

ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”

ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.

¶ ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು.

ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?›

‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.

¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›

‹ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು”› ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.