TSK

TSK · ಹೋಶೇ 7:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.

ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.

ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.

ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.

ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.

ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!

ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.

ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.

ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.

ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.

ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”

¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›

‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›