ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
TSK
TSK · ಹೋಶೇ 7:11
Treasury of Scripture Knowledge references in ಕನ್ನಡ IRV.
ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.
ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.
ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.
ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.