¶ “ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.
TSK
TSK · ಹೋಶೇ 7:13
Treasury of Scripture Knowledge references in ಕನ್ನಡ IRV.
ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.
¶ “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.
ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.
ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.
¶ “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›
ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.