TSK

TSK · ಹೋಶೇ 7:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!

ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.

ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.

ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.

ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.

ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.

ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.

ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

¶ ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”

ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.