ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
TSK
TSK · ಹೋಶೇ 8:13
Treasury of Scripture Knowledge references in ಕನ್ನಡ IRV.
ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.
ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.
ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.
ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.
ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.
¶ ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.