ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
TSK
TSK · ಹೋಶೇ 8:4
Treasury of Scripture Knowledge references in ಕನ್ನಡ IRV.
ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?
‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›
‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›