ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
TSK
TSK · ಹೋಶೇ 9:1
Treasury of Scripture Knowledge references in ಕನ್ನಡ IRV.
ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.
“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.
ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.
ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.