ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.
TSK
TSK · ಹೋಶೇ 9:13
Treasury of Scripture Knowledge references in ಕನ್ನಡ IRV.
ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.
‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ!
ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.
ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.
‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.