ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
TSK
TSK · ಹೋಶೇ 9:6
Treasury of Scripture Knowledge references in ಕನ್ನಡ IRV.
ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.
ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.
ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.