ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
TSK
TSK · ಹೋಶೇ 9:7
Treasury of Scripture Knowledge references in ಕನ್ನಡ IRV.
ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.
“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”
¶ “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;
ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.
ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.
ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
¶ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.