ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
TSK
TSK · ಯೆಶಾಯ 1:20
Treasury of Scripture Knowledge references in ಕನ್ನಡ IRV.
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.
ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.
ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.
ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
¶ ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.