ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
TSK
TSK · ಯೆಶಾಯ 1:23
Treasury of Scripture Knowledge references in ಕನ್ನಡ IRV.
¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
¶ ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.
ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
¶ “‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.
ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
ಆತನು ಅವರಿಗೆ, ‹“‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ›‹ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ”› ಎಂದು ಹೇಳಿದನು.
ಅದೇನೆಂದರೆ, ‹“ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.›
¶ ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.