ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.
TSK
TSK · ಯೆಶಾಯ 1:3
Treasury of Scripture Knowledge references in ಕನ್ನಡ IRV.
ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.
¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
‹ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ›‹ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.›
ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.