ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.
TSK
TSK · ಯೆಶಾಯ 1:5
Treasury of Scripture Knowledge references in ಕನ್ನಡ IRV.
ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
¶ “ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
¶ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!
¶ ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.