TSK

TSK · ಯೆಶಾಯ 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.

ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.

ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.

ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.

ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.

ಯೇಸು ಅದನ್ನು ಕೇಳಿ, ‹“ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.›

‹ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.›