ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
TSK
TSK · ಯೆಶಾಯ 1:6
Treasury of Scripture Knowledge references in ಕನ್ನಡ IRV.
ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.
ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.
ಯೇಸು ಅದನ್ನು ಕೇಳಿ, ‹“ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.›
‹ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.›