TSK

TSK · ಯೆಶಾಯ 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,

ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.

ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.

ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.

ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.

“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”

‹ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.›

¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.

ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.