ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.
TSK
TSK · ಯೆಶಾಯ 10:1
Treasury of Scripture Knowledge references in ಕನ್ನಡ IRV.
ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”
‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›
‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›
‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,›
¶ ‹“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.›
‹ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ”› ಅಂದನು.
ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.