TSK

TSK · ಯೆಶಾಯ 10:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ

ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.

ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.

ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.

ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.

ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?

¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.

ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.