ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
TSK
TSK · ಯೆಶಾಯ 10:3
Treasury of Scripture Knowledge references in ಕನ್ನಡ IRV.
ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.
ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.