TSK

TSK · ಯೆಶಾಯ 10:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?

ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.

ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.

ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.

ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.

ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.

ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!