ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
TSK
TSK · ಯೆಶಾಯ 10:9
Treasury of Scripture Knowledge references in ಕನ್ನಡ IRV.
ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”