TSK

TSK · ಯೆಶಾಯ 11:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.

¶ ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.

ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.

“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.

ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?