ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
TSK
TSK · ಯೆಶಾಯ 12:1
Treasury of Scripture Knowledge references in ಕನ್ನಡ IRV.
ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
¶ ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”
ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.