TSK

TSK · ಯೆಶಾಯ 12:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

¶ ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,