TSK

TSK · ಯೆಶಾಯ 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

¶ ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:

¶ ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.

¶ ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ

¶ ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?

ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.

ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.

ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.

¶ ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.

ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’

ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.

¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.