ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.
TSK
TSK · ಯೆಶಾಯ 14:1
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.
ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
¶ ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”
¶ ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”
“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
¶ ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.
ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.