ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
TSK
TSK · ಯೆಶಾಯ 14:2
Treasury of Scripture Knowledge references in ಕನ್ನಡ IRV.
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.
ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
¶ ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›
ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.