TSK

TSK · ಯೆಶಾಯ 14:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.

ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.

ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.

ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.

ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”

ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.

ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;