TSK

TSK · ಯೆಶಾಯ 14:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.

ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.

ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.

ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”

ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.

ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.

ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.

ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.

ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

¶ ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.

ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.

ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.