TSK

TSK · ಯೆಶಾಯ 14:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.

¶ ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ

ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.

ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.

ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.