ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
TSK
TSK · ಯೆಶಾಯ 17:14
Treasury of Scripture Knowledge references in ಕನ್ನಡ IRV.
¶ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”