ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
TSK
TSK · ಯೆಶಾಯ 17:6
Treasury of Scripture Knowledge references in ಕನ್ನಡ IRV.
ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.
¶ ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.