ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.
TSK
TSK · ಯೆಶಾಯ 19:12
Treasury of Scripture Knowledge references in ಕನ್ನಡ IRV.
ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.