TSK

TSK · ಯೆಶಾಯ 19:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.

ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.

ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.

ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.

ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.

ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.

¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.

ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.

ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.

ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.

ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”