¶ ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
TSK
TSK · ಯೆಶಾಯ 2:19
Treasury of Scripture Knowledge references in ಕನ್ನಡ IRV.
ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
¶ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.
ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
‹ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.›
ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.
¶ ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.