ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
TSK
TSK · ಯೆಶಾಯ 2:8
Treasury of Scripture Knowledge references in ಕನ್ನಡ IRV.
ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.
ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.
ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.