ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”
TSK
TSK · ಯೆಶಾಯ 20:6
Treasury of Scripture Knowledge references in ಕನ್ನಡ IRV.
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.